Skip to main content

ಕುರುಬರು ಭಾರತದ ಇತಿಹಾಸದ ಮೊದಲ ಸಾಮ್ರಾಜ್ಯವಾದ ಮೌರ್ಯ ಸಾಮ್ರಾಜ್ಯವನ್ನು ಕಟ್ಟಿದವರು.

ಕುರುಬ
ಒಂದು ಹಿಂದು ಸಮುದಾಯದ ಹೆಸರು. ಕುರುಬ ಎಂದರೆ ಹುಡುಕುವ ಅಥವ ಪಡೆಯುವ ಎಂದು ಅರ್ಥ ಬರುತ್ತದೆ. ಉದಾಹರಣೆ: ಜೇನು ಕುರುಬ ಜಾತಿ ಎಂದರೆ ಜೇನು ಹುಡುಕುವ ಜಾತಿ. ಕುರುಬರು ಹಾಲುಮತ ಅನುಯಾಯಿಗಳು. ಕುರುಬ ಎಂದರೆ ಜ್ಞಾನವನ್ನು(ಭ) ಹುಡುಕುವವನು (ಕುರು) ಎಂಬ ದಾರ್ಮಿಕ ಅರ್ಥವು ಇದೆ. ಕುರುಬ ಜಾತಿಯು ಅತಿ ಪುರಾತನವಾದ ಜಾತಿ.

 ಇತಿಹಾಸ ಪೂರ್ವ

ಕುರುಬ ಜನಾಂಗ ತುಂಬಾ ಪುರಾತನವಾದ ಜನಾಂಗ , ರಾಮಾಯಣ ಮತ್ತು ಮಹಾಭಾರತ ಕಾಲದಲ್ಲಿ ಕುರು ವಂಶ ಮತ್ತು ಯದು ವಂಶಗಳ ಪ್ರಸ್ತಾವನೆಯಾಗಿದೆ. ಮಾನವನು ಮೊದಲು ಕಾಡುಗಳಲ್ಲಿ ಬೇಟೆ ಆಡಿ ಮತ್ತು ಅಲೀದು ಗೆಡ್ಡೆ, ಗೆಣಸು ತಿನ್ನುತಿದ್ದ , ಕ್ರಮೇಣ ಅವನು ಪ್ರಾಣಿಗಳನ್ನು ಪಳಗಿಸಿ ಸಾಕ ತೊಡಗಿದ, ಆ ನಂತರ ಅವನು ವ್ಯವಸಾಯ ಮಾಡುವದನ್ನು ಕಲಿತ, ನಂತರ ಅವನು ಹಳ್ಳಿಗಳಲ್ಲಿ ವಾಸಿಸ ತೊಡಗಿದ. ಕುರುಬರು ಈ ಎಲ್ಲ ಮಾನವನ ಆಯಾಮಗಳನ್ನು ದಾಟಿದವರು. ಅತಿ ಪುರಾತನವಾದ ಈ ಸಮುದಾಯದಿಂದ ಕಾಲ ಕ್ರಮೇಣ ಇತರೆ ಜನಾಂಗದವರು ಬೇರೆಯಾಗ ತೊಡಗಿದರು. ಉದಾಹರಣೆಗೆ ವಕ್ಕಲುತನ ಮಾಡುವನು ವಕ್ಕಲಿಗನಾದ, ಬೇಟೆಯಾಡು ವವನು ಬೇಡನಾದ , ಮಡಿಕೆ ಮಾಡುವವನು ಕುಂಬಾರನಾದ , ಈ ಇತರೆ ಜನಾಂಗದವರು ಮಾನವನ ಬೇಡಿಕೆಗಳಿಗೆ ಅನುಗುಣವಾಗಿ ತಮ್ಮ ವೃತ್ತಿಗಳನು ಮಾಡತೊಡಗಿದರು. ಹೀಗೆ ಪುರಾತನವಾದ ಕುರುಬ ಮತ್ತು ಯಾದವ ವಂಶಗಳಿಂದ ಸಣ್ಣ ಪುಟ್ಟ ಜಾತಿಗಳು ಹುಟ್ಟಿಕೊಂಡವು.

ಭಾರತ ಇತಿಹಾಸ .

ಕುರುಬರು ಭಾರತದ ಇತಿಹಾಸದ ಮೊದಲ ಸಾಮ್ರಾಜ್ಯವಾದ ಮೌರ್ಯ ಸಾಮ್ರಾಜ್ಯವನ್ನು ಕಟ್ಟಿದವರು. ಮೌರ್ಯರ ಮೊದಲ ದೊರೆ ಚಂದ್ರಗುಪ್ತನು ಕುರಿಗಾಹಿಯಾಗಿದ್ದು, ಆಗಿನ ನಂದ ದೊರೆಗಳ ವಿರುದ್ಧ ಸಿಡಿದೆದ್ದು ತನ್ನದೇ ಆದ ಸಾಮ್ರಾಜ್ಯವನ್ನು ಚಾಣಕ್ಯನ ಸಹಾಯದಿಂದ ಕಟ್ಟಿದನು. ಇದರು ಗುರುತಾಗಿ ಭಾರತ ಸರ್ಕಾರವು ನವ ದೆಹಲಿಯಾ ಪಾರ್ಲಿಮೆಂಟ್ ಕಟ್ಟಡದ ೫ನೆ ಮಹಾದ್ವಾರದ ಬಳಿ ಚಂದ್ರಗುಪ್ತನ ಪುತ್ಥಳಿಯನ್ನು ಸ್ಥಾಪನೆ ಮಾಡಿ , ಅದರ ಕೆಳಗೆ " ಕುರಿ ಕಾಯುವ ಹುಡುಗ ತಾನು ಕಟ್ಟಲಿರುವ ಸಾಮ್ರಾಜ್ಯದ ಬಗ್ಗೆ ಕನಸು ಕಾಣುತಿರುವುದು" ಎಂದು ಬರಿಯಲಾಗಿದೆ. ನಂತರ ಕದಂಬರು ರಾಷ್ಟ್ರಕೂಟ, ಪಲ್ಲವ, ಹೊಯ್ಸಳ, ದೇವಗಿರಿಯ ಯಾದವ, ಹೊಲ್ಕರ್ ರಾಜರು ಮತ್ತು ವಿಜಯನಗರ ಸಾಮ್ರಾಜ್ಯವನ್ನು ಸ್ಥಾಪನೆ ಮಾಡಿದರು.

ಇತರೆ ಹೆಸರುಗಳು.

ಕುರುಬರು, ಹಾಲುಮತ, ಹೆಗಡೆಗೌಡ, ಕುರುಬ ಗೌಡರು, ಗೌಡ.

ಕರ್ನಾಟಕದ ಕುರುಬ ಗೌಡರು.

ಕರ್ನಾಟಕದ ೩ನೆ ಅತಿ ದೊಡ್ಡ ಸಮುದಾಯ, ಕುರುಬ ಸಮುದಾಯ. ಕರ್ನಾಟಕದ ಪ್ರಮುಖ ಸಾಮ್ರಾಜ್ಯಗಳನ್ನು ಕಟ್ಟಿದವರು ಕುರುಬ ಗೌಡರು. ರಾಷ್ಟ್ರಕೂಟ , ಹೊಯ್ಸಳ ಮತ್ತು ವಿಜಯನಗರ ಸಾಮ್ರಾಜ್ಯ ಪ್ರಮುಖವಾದವು. ವಿಜಯನಗರ ಸಾಮ್ರಾಜ್ಯ ಸ್ಥಾಪನೆಯಿಂದ ದಕ್ಷಿಣ ಭಾರತದಲ್ಲಿ ಹಿಂದೂ ಸಂಸ್ಕೃತಿ ಉಳಿಯುವಂತೆ ಆಯಿತು, ಹಿಂದೂಸಂಸ್ಕೃತಿ ಉಳಿಯಲು ಕಾರಣವಾದವರು ಕುರುಬ ಗೌಡ ಸಹೋದರರಾದ ಹಕ್ಕ ರಾಯ ಮತ್ತು ಬುಕ್ಕ ರಾಯ.

ಕುರುಬ ಗೌಡರ ಸಂಪ್ರದಾಯ.

ಕುರುಬ ಗೌಡರು ಅನಾದಿ ಕಾಲದಿಂದಲೂ ಪ್ರಕೃತಿಯನ್ನು ಪೂಜಿಸಿ ಕೊಂಡು ಬಂದವರು, ಕಲ್ಲನ್ನು ಪೂಜಿಸುವುದು ಪುರಾತನವಾದ ಸಂಪ್ರದಾಯ , ಅದೇ ಸಂಸ್ಕೃತಿ ಬರ ಬರುತ್ತಾ ಶಿವ ಲಿಂಗ ಪೂಜೆಯಾಗಿ ಮಾರ್ಪಟ್ಟಿತು.ಶ್ರೀ ಜಗದ್ಗುರು ರೇವಣ ಸಿದ್ದೇಶ್ವರರು, ಮತ್ತು ಶ್ರೀ ಜಗದ್ಗುರು ಶಾಂತಿಮಯ್ಯ ಒಡೆಯರು ಈ ಜನಾಂಗದ ಆದಿ ಗುರುಗಳು. ಇವರು ಶಿವನ್ನನ್ನು ಬೀರೇಶ್ವರ , ಮೈಲಾರಲಿಂಗ , ಮಾದೇಶ್ವರ , ಮಲ್ಲಪ್ಪ , ಮಲ್ಲಿಕಾರ್ಜುನ ಮುಂತಾದ ಹೆಸರಿನಲ್ಲಿ ಪುಜಿಸುತಾರೆ. ಎಲ್ಲಮ್ಮ , ಭೀಮವ್ವ , ಚೌಡಮ್ಮ ಮುಂತಾದ ಹೆಸರಿನಲ್ಲಿ ಶಕ್ತಿ ದೇವಿಯನ್ನು ಪುಜಿಸುತಾರೆ. ಕರ್ನಾಟಕ ಮತ್ತು ಅಂದ್ರ ಪ್ರದೇಶದ ಬಹುತೇಕ ಹಳ್ಳಿಗಳಲ್ಲಿ ಬೀರೇಶ್ವರ ಅಥವಾ ಮೈಲಾರಲಿಂಗೇಶ್ವರ ದೇವಾಲಯವಿರುತ್ತೆ , ಈ ದೇವಾಲಯಗಳ ಪೂಜಾರಿಗಳು ಕುರುಬಗೌಡರಾಗಿರುತ್ತಾರೆ.ಹಾಗು ಹರಿಗೆ ಸೇವೆ ಮತ್ತು ಭೂತ್ತಪ್ಪ ದೇವರನ್ನು ಪೂಜಿಸುತ್ತಾರೆ

ಕುರುಬ ಗೌಡರ ಹಬ್ಬಗಳು.

ಶ್ರೀರೇವಣ ಸಿದ್ಡೇಶ್ವರ ಜಾತ್ರೆ ಹೊಳೆ ಸೇವೆ
ಮೈಲಾರ ಜಾತ್ರೆ
ಮಾದೇಶ್ವರ ಜಾತ್ರೆ
ಬೀರೆದೇವರ ಜಾತ್ರೆ
ಕನಕದಾಸ ಜಯಂತಿ
ಕಾರ್ಣಿಕೊತ್ಸವ
ಮಾರಿ ಹಬ್ಬ
ಬಿಳಿಗಿರಿ ರಂಗನಾಥ ಸ್ವಾಮಿ ಜಾತ್ರೆ
ದೊಡ್ಡ ದ್ಯವರ ಜಾತ್ರೆ
ತೆಂಗಿನಕಾಯಿ ಪವಾಡ

ಕುರುಬ ಉಪ ಜಾತಿಗಳು .

ಕಾಡು ಕುರುಬ
ಜೇನು ಕುರುಬ
ಸಂಚಾರಿ ಕುರುಬ
ಗೊಂಡ ಕುರುಬ
ಬೆಟ್ಟ ಕುರುಬ
ಕುರುಬ ಗೌಡರ ಇತಿಹಾಸ ಕತೆಗಳು ಸಂಪಾದಿಸಿ

ಹಾಲುಮತ ಕುರುಬ ಪುರಾಣ
ಮಾದೇಶ್ವರ ಪುರಾಣ
ಕಾಟಮರಾಜುವಿನ ಕಥೆ

ಕುರುಬ ಗೌಡರ ಜನಪದ ಕಲೆಗಳು.

ಕಂಸಾಳೆ
ಡೊಳ್ಳು ಕುಣಿತ
ಗೊರವರ ಕುಣಿತ
ಬೀರೆದೇವರ ಕುಣಿತ
ವೀರಗಾಸೆ

ಕುರುಬ ಗೌಡರ ಧರ್ಮಕ್ಷೇತ್ರಗಳು.

ಶ್ರೀ ರೇಣುಕಾಚಾರ್ಯರ ಮಹಾ ಸಂಸ್ಥಾನ, ಸರವೂರು, ಬಿಜಾಪುರ ಜಿಲ್ಲೆ
ಶ್ರೀ ರೇಣುಕಾಚಾರ್ಯರ ಮಹಾ ಸಂಸ್ಥಾನ, ಅಣತಿ, ಹಾಸನ ಜಿಲ್ಲೆ
ಬಿಳಿಗಿರಿ ರಂಗನಾಥ ಸ್ವಾಮಿ ಬೆಟ್ಟ
ಮಾದೇಶ್ವರ ಬೆಟ್ಟ
ಮೈಲಾರ
ಕಾಗಿನೆಲೆ
ಹಂಪಿ
ದೆವರ ಆದಿಹಲ್ಲಿ ಹಿರೆ ಬೀರಪ್ಪ ಅರಸಿಕೆರೆ
ಶ್ರಿ ರಂಗನಾಥ

ಗುಡ್ಡದ ಮಲ್ಲಯ್ಯ, ಹಲ್ಹಹಾರ್ವಿ ಗ್ರಾಮ ಮತ್ತು ಮಂಡಲೆ, ಆಲೂರು ತಾಲುಕು, ಕರ್ನುಲ್ ಜಿಲ್ಲೆ, ಆಂದ್ರಾಪ್ರದೇಶ್ (ಗಡಿನಾಡು)
ಬಲ್ಲೂರಪ್ಪ, ಹಲ್ಹಹಾರ್ವಿ ಗ್ರಾಮ ಮತ್ತು ಮಂಡಲೆ, ಆಲೂರು ತಾಲುಕು, ಕರ್ನುಲ್ ಜಿಲ್ಲೆ, ಆಂದ್ರಾಪ್ರದೇಶ್ (ಗಡಿನಾಡು)

ಕುರುಬ ಗೌಡರ ಇತಿಹಾಸ ಪುರುಷರು.

ಜಗದ್ಗುರು ಶಾಂತ ಮುತ್ತಯ್ಯ (ಶಾಂತಿಮಯ್ಯ)ಒಡೆಯರ್
ಮಹಾಕವಿ ಕಾಳಿದಾಸ
ದಾಸ ಶ್ರೇಷ್ಟ ಕನಕದಾಸ
ಸಂಗೊಳ್ಳಿ ರಾಯಣ್ಣ
ಹಕ್ಕ ರಾಯ
ಬುಕ್ಕ ರಾಯ
ಕಾಕ ನಾಯಕ
ಜುಂಜೆ ಗೌಡ
ಚಂದ್ರಗುಪ್ತ ಮೌರ್ಯ
(ಛತ್ರಪತಿ ಶಿವಾಜಿ) * (ಸಾಮ್ರಾಟ್ ಅಶೋಕ)
(ಸೊಲ್ಲಾಪುರದ ಸಿದ್ದರಾಮೇಶ್ವರರು) * (ವಚನಕಾರ ವೀರ ಗೊಲ್ಲಾಳ) * (ವಚನಕಾರ ಬೋಮ್ಮಗೊಂಡೇಶ್ವರ)

Comments

Popular posts from this blog

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜೀವನ ಚರಿತ್ರೆಯನ್ನೊಮ್ಮೆ ಓದಿ

ಸಂಗೊಳ್ಳಿ ರಾಯಣ್ಣ  –  ಬ್ರಿಟಿಷರ  ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬ.  ಕಿತ್ತೂರು ಚೆನ್ನಮ್ಮಳ  ಬಲಗೈ ಬಂಟನಾದವನು ಸಂಗೊಳ್ಳಿ ರಾಯಣ್ಣ. ಪರಿಚಯ ಸಂಪಾದಿಸಿ ಬೆಳಗಾವಿ  ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿರುವ ನೇಗಿನಹಾಳ ಗ್ರಾಮವು ಕೆಂಚವ್ವನ ತವರು ಮನೆಯಾಗಿದ್ದರು ಸಂಗೊಳ್ಳಿಯು ರಾಯಣ್ಣನ ಜನ್ಮಸ್ಥಳ ಹಾಗೂ ಹೋರಾಟದ ಭೂಮಿಯಾಗಿದೆ. ಚೆನಮ್ಮಳ ಆಸ್ತಾನದಲ್ಲಿ ವಾಲಿಕರ್ ವೃತ್ತಿ ಮಾಡುವ ಕುರುಬ ಮನೆತನದವನಾಗಿದ್ದ ರಾಯಣ್ಣನನ್ನು ಜನ, ರಾಯಾ ಎಂದು ಕರೆಯುತ್ತಿದರು. ಅಷ್ಠೆ ಅಲ್ಲದೆ ಈತನು ಗೇರಿಲ್ಲಾ ತಂತ್ರದ ರೂವಾರಿಯಾಗಿದ್ದನು.  ಬ್ರಿಟಿಷರ  ವಿರುದ್ಧದ ಯುದ್ಧದಲ್ಲಿ ಚನ್ನಮ್ಮ ಹಾಗು ರಾಯಣ್ಣ ಇಬ್ಬರೂ ಸೆರೆಯಾಳಾದರು.  ಬ್ರಿಟಿಷರು ಚನ್ನಮ್ಮನನ್ನು  ಬೈಲಹೊಂಗಲದಲ್ಲಿ  ಸೆರೆಯಲ್ಲಿಟ್ಟರು. ಸಂಗೊಳ್ಳಿ ರಾಯಣ್ಣನನ್ನು ಬ೦ಧಿಸಿ ನ೦ದಗಡ ದಲ್ಲಿ ಗಲ್ಲಿಗೆರಿಸಿದರು.  ಜನವರಿ ೨೬  ೧೮೩೧ರಂದು ಗಲ್ಲಿ ಗೇರಿಸಿದರು. ಸಂಗೊಳ್ಳಿ ರಾಯಣ್ಣ ಜನಿಸಿದ ದಿನಾಂಕವಾದ  ಆಗಸ್ಟ್ ೧೫  ೧೭೯೮ ,  ಭಾರತಕ್ಕೆ  ಸ್ವಾತಂತ್ರ್ಯ ದೊರೆತ ದಿನಾಂಕವಾದರೆ, ಆತ ಗಲ್ಲಿಗೇರಿದ ದಿನಾಂಕ  ಜನವರಿ ೨೬ , ಭಾರತವು  ಗಣರಾಜ್ಯವೆಂದು  ಘೋಷಿಸಿದ ದಿನಾಂಕವಾಗಿದೆ. ರಾಯಣ್ಣನ ಉಕ್ತಿ, “ನನ್ನ ಕೊನೆ ಆಸೆ ಏನೆಂದರೆ, ಮತ್ತೆ ನಾನು ಈ ದೇಶದಲ್ಲಿ...

ಕುರುಬರ ಇತಿಹಾಸ ತಿಳಿಯಿರಿ

ಕುರುಬರ ಇತಿಹಾಸ ಪರಂಪರೆ, ಭಾಗ ೨೮ ಹಾಲುಮತ ಹುಕ್ಕಬುಕ್ಕ ಸಾಂಸ್ಕೃತಿಕ ಪ್ರತಿಷ್ಠಾನ ಬಳ್ಳಾರಿ ಕುರುಭರು.. ನಾವು ಕುರುಭರು ಕುರುಭರು ಇಚ್ಚಿಸಿದ್ದಲ್ಲಿ ಅವರಿಗೆ ವೈಷ್ಣವ ದೀಕ್ಷೆ ನೀಡುತ್ತೇನೆ :-- ಪೇಜಾವರ ಶ್ರೀ ಪಾದರು , ಉಡುಪಿ ನಿಮ್ಮ ಯಾವ ದೀಕ್ಷೆಯೂ ನಮಗೆ ಬೇಕಾಗಿಲ್ಲ , ಕುರುಭರು ತಾಯಿ ಗರ್ಭದಲ್ಲಿ ಇರುವಾಗಲೇ ದೀಕ್ಷೆ ಪಡೆದವರು :- ಸಿದ್ದರಾಮಯ್ಯ , ಪ್ರಸ್ತುತ ಮುಖ್ಯಮಂತ್ರಿ ವಾಹ್..! ಎಂಥಾ ಮಾತು ಸಿದ್ದರಾಮಯ್ಯ.. ಅಂದು ನನಗೆ ಸಿದ್ದರಾಮಯ್ಯ ಬಹಳವೇ ಇಷ್ಟವಾದರು , ಮನುಷ್ಯ ತನ್ನ ಕುಲದ ಸತ್ ಸಂಪ್ರದಾಯ ಬಿಟ್ಟುಕೊಡಲಿಲ್ಲ ...! ಭೇಷ್ ಎನಿಸಿತು.  ಕುರುಭರ ಇತಿಹಾಸ ತಿಳಿಯಿರಿ. ಕುರುಭರು ಮೂಲತಃ ನಾಗಕುಲದವರು ಎನ್ನಿಸಿಕೊಳ್ಳುವರು , ಪಲ್ಲವರು ಎಂದು ಕರ್ನಾಟಕದಲ್ಲಿ , ಪೊಲಿಯಾರ್ / ಪೊಲಯರ್ ಎಂದು ಕೇರಳದಲ್ಲಿ ಪಲ್ಲಿಗ ಎಂದು ಮಹಾರಾಷ್ಟ್ರದಲ್ಲಿ , ಉತ್ತರ ಭಾರತದೆಡೆ ಹಟ್ಟಿಗಾರರೆಂದು ಗುರುತಿಸಲ್ಪಡುತ್ತಾರೆ‌. ಕುರುಭ ( ಕುರು - ಪರತತ್ವ ಭ - ಗಳಿಸುವವ) ಎಂಬ ದೀಕ್ಷಾ ಪದ್ದತಿ. ಕುರುಭ ಒಂದು ಸಿದ್ದ ಶೈವ ಶಾಖೆ. ಕುರುಭರು ಅರ್ಥಾತ್ ಪಲ್ಲವರು 5-7ನೇ ಶತಮಾನದಲ್ಲಿ ಲಿಂಗ ದರಿಸುತ್ತಿದ್ದರು ಎಂಬ ವಿವರ ಶಾಸನಗಳಲ್ಲಿ ಇದೆ. ಪಲ್ಲವರ ಸಹೋದರ ವಂಶಾವಳಿ ಛಲವಾದಿ ಚಾಳುಕ್ಯ ಮಾದಿಗರು (ಕುರುಭರಲ್ಲಿ ಸಾದರು) ಸಹ ಲಿಂಗದಾರಿಗಳಾಗಿದ್ದ ವಿವರವಿದೆ. 2ನೇ ಶತಮಾನದಲ್ಲಿ ಭಾರತದ ವಂಶಸ್ಥರು ಭಾರ ಕುಲದ ಮಾದಿಗರು ಭಾರಶಿವ ನೆಂಬ ರಾಜ ...