Skip to main content

ವಿಶ್ವನಾಥ್‍ರವರು ಮತ್ತು ಸಿದ್ದರಾಮಯ್ಯನವರ ಮುಸುಕಿನ ಜಗಳದಲ್ಲಿ ಬಡವಾಗುತ್ತಿರುವ ಕುರುಬ ಸಮಾಜ.


ರಾಜಕೀಯ ಭಿನ್ನಾಭಿಪ್ರಾಯಗಳಿಂದ ಕುರುಬ ಸಮಾಜದ ಹಿರಿಯರಾದ ವಿಶ್ವನಾಥ್‍ರವರು ಮತ್ತು
ಸಿದ್ದರಾಮಯ್ಯನವರ ಮುಸುಕಿನ ಜಗಳದಲ್ಲಿ ಬಡವಾಗುತ್ತಿರುವ ಕುರುಬ ಸಮಾಜ.
------------------------------------------------------------------

     ಭಾರತ ದೇಶದಲ್ಲಿ 14 ಕೋಟಿಯಷ್ಟು  ಜನಸಂಖ್ಯೆಯನ್ನು  ಹೊಂದಿರುವ ವಿವಿಧ ಹೆಸರುಗಳಿಂದ ಕರೆಯಲ್ಪಡುವ ಕುರುಬ ಸಮಾಜ   ಕರ್ನಾಟಕದಲ್ಲಿ 30 ಜಿಲ್ಲೆಗಳಲ್ಲೂ  ವಿಸ್ತಾರವಾಗಿ  ಹರಡಿಕೊಂಡಿರುವ  ಸಮಾಜ  ಸಾಮಾಜಿಕವಾಗಿ, ಶೈಕ್ಷಣಿಕವಾಗಿ,
ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅಭಿವೃದ್ಧಿಯನ್ನು ಹೊಂದಿಲ್ಲದೇ ಇರುವುದು ದುರಂತ. ಇಂತಹ  ಸ್ಥಿತಿಯಲ್ಲಿ  ಕುರುಬರು ಜೀವಿಸುತ್ತಿರುವಾಗ,  ಸಿದ್ದರಾಮಯ್ಯನವರು ರಾಜ್ಯ ಮುಖ್ಯಮಂತ್ರಿಯಾಗಿದ್ದರು ಎಂಬುದು ಹೆಮ್ಮೆ ತರುವಂತದ್ದು. ಹೆಚ್. ವಿಶ್ವನಾಥ
ರವರ ಕೊಡುಗೆಯೂ  ಸಮಾಜಕ್ಕೆ ಅಪಾರವಾದುದು.  ಕಾಗಿನೆಲೆಯಲ್ಲಿ  ಕನಕ ಗುರುಪೀಠ  ಸ್ಥಾಪನೆ ಮಾಡುವಲ್ಲಿ  ಸಂಸ್ಥಾಪನಾ   ಅಧ್ಯಕ್ಷರಾಗಿ ಹಿರಿಯಣ್ಣನ ಸ್ಥಾನದಲ್ಲಿ ನಿಂತಿದ್ದರು. ಸಮಾಜದಲ್ಲಿ ಇರುವ ಬೆರಳಣಿಕೆಯಷ್ಟು ರಾಜಕೀಯ ಮುಖಂಡರÀ ಏಳಿಗೆಯನ್ನು
ಕುರುಬ ಸಮಾಜವು  ಬಯಸುತ್ತಿದೆ.  ಆದರೆ  ರಾಜಕೀಯ ವಿಷಯಗಳಿಗೆ ಸಂಬಂಧಪಟ್ಟಂತೆ  ವೈಯಕ್ತಿಕ ಭಿನ್ನಾಭಿಪ್ರಾಯಗಳು  ಬಹಿರಂಗವಾಗಿ ಹೇಳಿಕೆ ನೀಡುತ್ತಿ ರುವುದು. ಕುಗ್ಗಿರುವ ಸಮಾಜವನ್ನು ಮತ್ತಷ್ಟು ಕುಗ್ಗಿಸುವಂತೆ ಮಾಡಲಾಗುತ್ತಿದೆ.

     ಕನಕ ಗುರುಪೀಠದ ಸಂಸ್ಥಾಪಕರಾದ  ಹೆಚ್. ವಿಶ್ವನಾಥರವರು ಮಠದಲ್ಲಿ ಜಗದ್ಗುರುಗಳ ಜೊತೆ ಚರ್ಚೆ  ನಡೆಸಬಹುದಿತ್ತು. ಕಾಂಗ್ರೇಸ್ ಪಕ್ಷಕ್ಕೆ ಸಿದ್ದರಾಮಯ್ಯನವರು ಬಂದಾಗ  ಆಹ್ವಾನಿಸಿದ್ದು  ಹೆಚ್. ವಿಶ್ವನಾಥರು, ಆನಂತರ ರಾಜಕೀಯದಲ್ಲಿ ಉಂಟಾದ
ಭಿನ್ನಾಭಿಪ್ರಾಯಗಳಿಗೆ ಕನಕ ಗುರುಪೀಠದ ಜಗದ್ಗುರುಗಳು ಹೊಣೆ ಹೇಗಾಗುತ್ತಾರೆ. ಜಗದ್ಗುರುಗಳು ಕುರುಬ ಸಮಾಜದ ಜಾಗೃತಿಗೆ,  ಸಂಘಟನೆಗಾಗಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ.  ಅಷ್ಟಕ್ಕೂ ಕುರುಬ ಸಮಾಜದಿಂದ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಗಳಾಗಿದ್ದರೂ ಎಂಬ ಹೆಮ್ಮೆ ಎಂಬುದನ್ನು  ಬಿಟ್ಟರೆ ಕುರುಬ ಸಮಾಜಕ್ಕೆ  ನಿರೀಕ್ಷೆ ಮಟ್ಟದಲ್ಲಿ ಅನುದಾನಗಳು  ಬಿಡುಗಡೆಯಾಗಿಲ್ಲ.
"ಸರ್ವರಿಗೂ ಸಮಪಾಲು ಸಮಬಾಳು" ಎಂಬ ಘೋಷಣೆಯಲ್ಲಿ ಅನ್ಯ ಸಮಾಜದ ಕಡೆ ಗಮನ ಹರಿಸಿದ  ಸರ್ಕಾರಕ್ಕೆ ಕುರುಬರು ವಿಶೇಷವಾಗಿ ಕಂಡಿಲ್ಲ. ಸಮಾಜದ ಒಬ್ಬ ವ್ಯಕ್ತಿ  ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿದ್ದಾಗ, ಸಮಾಜದ ಗುರುಪೀಠ ಅವರ ಪರವಾಗಿ
ನಿಲ್ಲುವುದರಲ್ಲಿ  ಯಾವುದೇ ತಪ್ಪಿಲ್ಲ. ಸಿದ್ದರಾಮಯ್ಯನವರ ಸ್ಥಾನದಲ್ಲಿ  ಹೆಚ್. ವಿಶ್ವನಾಥರವರು ಇದ್ದರೂ  ಅವರ ಪರವಾಗಿಯೇ  ಧ್ವನಿಯಾಗುತ್ತಿದ್ದರು.

     ಸಮಾಜದ  ಸರ್ಕಾರಿ ಅಧಿಕಾರಿಗಳ  ವರ್ಗಾವಣೆ ವಿಷಯದಲ್ಲಿ ಜಗದ್ಗುರುಗಳು  ಹೇಳಿಕೆ ನೀಡಿರುವುದನ್ನು ಮಾಧ್ಯಮಗಳು ವೈಭವೀಕರಿಸುತ್ತಿವೆ. ಜಗದ್ಗುರುಗಳು ಗೆದ್ದೆತ್ತಿನ ಬಾಲ ಹಿಡಿಯುವುದೇ ಆಗಿದ್ದಿದ್ದರೆ. ಈಗ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಲ್ಲ. 
ಆಡಳಿತ ನಡೆಸುತ್ತಿರುವುದು ಹೆಚ್. ವಿಶ್ವನಾಥರವರು ಪ್ರತಿನಿಧಿಸುತ್ತಿರುವ ಜೆಡಿಎಸ್ ಪಕ್ಷ.

     ಸಮಾಜ ಯುವಶಕ್ತಿ ಜಾಗೃತವಾಗುತ್ತಿದೆ. ಜಗದ್ಗುರು ಶ್ರೀಶ್ರೀಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳ ಮಾರ್ಗದರ್ಶದಲ್ಲಿಸಾಮಾಜಿಕ,  ಶೈಕ್ಷಣಿಕ,  ಆರ್ಥಿಕ ಕ್ಷೇತ್ರಗಳಲ್ಲಿ  ಸದೃಢರಾಗಲು  ಹಲವಾರು  ಯೋಜನೆಗಳು  ಕಾರ್ಯರೂಪಕ್ಕೆ ತರಲಾಗುತ್ತಿವೆ.
ರಾಜಕೀಯದ   ಭಿನ್ನಾಭಿಪ್ರಾಯಗಳಿಗೆ   ಕುರುಬ  ಸಮಾಜವನ್ನು,   ಸಮಾಜದ  ಸ್ವಾಭಿಮಾನದ ಸಂಕೇತವಾಗಿರುವ ಶ್ರೀ ಕನಕ ಗುರುಪೀಠವನ್ನು  ಜಗದ್ಗುರುಗಳನ್ನು  ಹೊಣೆ ಮಾಡುವುದರಲ್ಲಿ  ಯಾವುದೇ ಅರ್ಥವಿಲ್ಲ. ರಾಜಕೀಯ  ಭಿನ್ನಾಭಿಪ್ರಾಯಗಳಿಂದ 
ಸಮಾಜದಲ್ಲಿ  ಒಡಕು ಉಂಟಾಗುತ್ತದೆ.  ಕುರುಬ  ಸಮಾಜ ಸಂಘಟನೆಯಾಗಲು  ಹೆಚ್. ವಿಶ್ವನಾಥರವರ ಮಾರ್ಗದರ್ಶನವೂ ಅತ್ಯಗತ್ಯವಾಗಿದೆ.
ಈ ರೀತಿಯ  ಅಸಮಾಧಾನದ ಬಹಿರಂಗ  ಹೇಳಿಕೆಗಳು ಸಮಾಜದಒಗ್ಗಟ್ಟಿನಲ್ಲಿ  ಒಡಕು  ಮೂಡಿಸುವಂತದ್ದು.   ದೇಶದಲ್ಲಿ 14 ಕೋಟಿ ಜನಸಂಖ್ಯೆಯನ್ನು ಹೊಂದಿರುವ ಸಮಾಜವನ್ನು ಒಗ್ಗೂಡಿಸಿ ಎರಡನೇ ಹಂತದ ನಾಯಕರನ್ನು ಬೆಳೆಸುವ ರಾಜಕೀಯ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹಿಡಿತ ಸಾಧಿಸುವತ್ತ ಪ್ರಯತ್ನಗಳಾಗಲಿ ಎಂದು ಸಮಸ್ತ ಕುರುಬ ಸಮಾಜದ  ಪರವಾಗಿ  ಹಾಲುಮತ  ಮಹಾಸಭಾ  ಈ ಮೂಲಕ ರಾಜಕೀಯ ಮುಖಂಡರಿಗೆ ವಿನಂತಿ ಮಾಡಿಕೊಳ್ಳುತ್ತಿದೆ.

Comments

Post a Comment

Popular posts from this blog

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜೀವನ ಚರಿತ್ರೆಯನ್ನೊಮ್ಮೆ ಓದಿ

ಸಂಗೊಳ್ಳಿ ರಾಯಣ್ಣ  –  ಬ್ರಿಟಿಷರ  ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬ.  ಕಿತ್ತೂರು ಚೆನ್ನಮ್ಮಳ  ಬಲಗೈ ಬಂಟನಾದವನು ಸಂಗೊಳ್ಳಿ ರಾಯಣ್ಣ. ಪರಿಚಯ ಸಂಪಾದಿಸಿ ಬೆಳಗಾವಿ  ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿರುವ ನೇಗಿನಹಾಳ ಗ್ರಾಮವು ಕೆಂಚವ್ವನ ತವರು ಮನೆಯಾಗಿದ್ದರು ಸಂಗೊಳ್ಳಿಯು ರಾಯಣ್ಣನ ಜನ್ಮಸ್ಥಳ ಹಾಗೂ ಹೋರಾಟದ ಭೂಮಿಯಾಗಿದೆ. ಚೆನಮ್ಮಳ ಆಸ್ತಾನದಲ್ಲಿ ವಾಲಿಕರ್ ವೃತ್ತಿ ಮಾಡುವ ಕುರುಬ ಮನೆತನದವನಾಗಿದ್ದ ರಾಯಣ್ಣನನ್ನು ಜನ, ರಾಯಾ ಎಂದು ಕರೆಯುತ್ತಿದರು. ಅಷ್ಠೆ ಅಲ್ಲದೆ ಈತನು ಗೇರಿಲ್ಲಾ ತಂತ್ರದ ರೂವಾರಿಯಾಗಿದ್ದನು.  ಬ್ರಿಟಿಷರ  ವಿರುದ್ಧದ ಯುದ್ಧದಲ್ಲಿ ಚನ್ನಮ್ಮ ಹಾಗು ರಾಯಣ್ಣ ಇಬ್ಬರೂ ಸೆರೆಯಾಳಾದರು.  ಬ್ರಿಟಿಷರು ಚನ್ನಮ್ಮನನ್ನು  ಬೈಲಹೊಂಗಲದಲ್ಲಿ  ಸೆರೆಯಲ್ಲಿಟ್ಟರು. ಸಂಗೊಳ್ಳಿ ರಾಯಣ್ಣನನ್ನು ಬ೦ಧಿಸಿ ನ೦ದಗಡ ದಲ್ಲಿ ಗಲ್ಲಿಗೆರಿಸಿದರು.  ಜನವರಿ ೨೬  ೧೮೩೧ರಂದು ಗಲ್ಲಿ ಗೇರಿಸಿದರು. ಸಂಗೊಳ್ಳಿ ರಾಯಣ್ಣ ಜನಿಸಿದ ದಿನಾಂಕವಾದ  ಆಗಸ್ಟ್ ೧೫  ೧೭೯೮ ,  ಭಾರತಕ್ಕೆ  ಸ್ವಾತಂತ್ರ್ಯ ದೊರೆತ ದಿನಾಂಕವಾದರೆ, ಆತ ಗಲ್ಲಿಗೇರಿದ ದಿನಾಂಕ  ಜನವರಿ ೨೬ , ಭಾರತವು  ಗಣರಾಜ್ಯವೆಂದು  ಘೋಷಿಸಿದ ದಿನಾಂಕವಾಗಿದೆ. ರಾಯಣ್ಣನ ಉಕ್ತಿ, “ನನ್ನ ಕೊನೆ ಆಸೆ ಏನೆಂದರೆ, ಮತ್ತೆ ನಾನು ಈ ದೇಶದಲ್ಲಿ...

ಕುರುಬರು ಭಾರತದ ಇತಿಹಾಸದ ಮೊದಲ ಸಾಮ್ರಾಜ್ಯವಾದ ಮೌರ್ಯ ಸಾಮ್ರಾಜ್ಯವನ್ನು ಕಟ್ಟಿದವರು.

ಕುರುಬ ಒಂದು ಹಿಂದು ಸಮುದಾಯದ ಹೆಸರು. ಕುರುಬ ಎಂದರೆ ಹುಡುಕುವ ಅಥವ ಪಡೆಯುವ ಎಂದು ಅರ್ಥ ಬರುತ್ತದೆ. ಉದಾಹರಣೆ: ಜೇನು ಕುರುಬ ಜಾತಿ ಎಂದರೆ ಜೇನು ಹುಡುಕುವ ಜಾತಿ. ಕುರುಬರು ಹಾಲುಮತ ಅನುಯಾಯಿಗಳು. ಕುರುಬ ಎಂದರೆ ಜ್ಞಾನವನ್ನು(ಭ) ಹುಡುಕುವವನು (ಕುರು) ಎಂಬ ದಾರ್ಮಿಕ ಅರ್ಥವು ಇದೆ. ಕುರುಬ ಜಾತಿಯು ಅತಿ ಪುರಾತನವಾದ ಜಾತಿ.  ಇತಿಹಾಸ ಪೂರ್ವ ಕುರುಬ ಜನಾಂಗ ತುಂಬಾ ಪುರಾತನವಾದ ಜನಾಂಗ , ರಾಮಾಯಣ ಮತ್ತು ಮಹಾಭಾರತ ಕಾಲದಲ್ಲಿ ಕುರು ವಂಶ ಮತ್ತು ಯದು ವಂಶಗಳ ಪ್ರಸ್ತಾವನೆಯಾಗಿದೆ. ಮಾನವನು ಮೊದಲು ಕಾಡುಗಳಲ್ಲಿ ಬೇಟೆ ಆಡಿ ಮತ್ತು ಅಲೀದು ಗೆಡ್ಡೆ, ಗೆಣಸು ತಿನ್ನುತಿದ್ದ , ಕ್ರಮೇಣ ಅವನು ಪ್ರಾಣಿಗಳನ್ನು ಪಳಗಿಸಿ ಸಾಕ ತೊಡಗಿದ, ಆ ನಂತರ ಅವನು ವ್ಯವಸಾಯ ಮಾಡುವದನ್ನು ಕಲಿತ, ನಂತರ ಅವನು ಹಳ್ಳಿಗಳಲ್ಲಿ ವಾಸಿಸ ತೊಡಗಿದ. ಕುರುಬರು ಈ ಎಲ್ಲ ಮಾನವನ ಆಯಾಮಗಳನ್ನು ದಾಟಿದವರು. ಅತಿ ಪುರಾತನವಾದ ಈ ಸಮುದಾಯದಿಂದ ಕಾಲ ಕ್ರಮೇಣ ಇತರೆ ಜನಾಂಗದವರು ಬೇರೆಯಾಗ ತೊಡಗಿದರು. ಉದಾಹರಣೆಗೆ ವಕ್ಕಲುತನ ಮಾಡುವನು ವಕ್ಕಲಿಗನಾದ, ಬೇಟೆಯಾಡು ವವನು ಬೇಡನಾದ , ಮಡಿಕೆ ಮಾಡುವವನು ಕುಂಬಾರನಾದ , ಈ ಇತರೆ ಜನಾಂಗದವರು ಮಾನವನ ಬೇಡಿಕೆಗಳಿಗೆ ಅನುಗುಣವಾಗಿ ತಮ್ಮ ವೃತ್ತಿಗಳನು ಮಾಡತೊಡಗಿದರು. ಹೀಗೆ ಪುರಾತನವಾದ ಕುರುಬ ಮತ್ತು ಯಾದವ ವಂಶಗಳಿಂದ ಸಣ್ಣ ಪುಟ್ಟ ಜಾತಿಗಳು ಹುಟ್ಟಿಕೊಂಡವು. ಭಾರತ ಇತಿಹಾಸ . ಕುರುಬರು ಭಾರತದ ಇತಿಹಾಸದ ಮೊದಲ ಸಾಮ್ರಾಜ್ಯವಾದ ಮೌರ್ಯ...

ಕುರುಬರ ಇತಿಹಾಸ ತಿಳಿಯಿರಿ

ಕುರುಬರ ಇತಿಹಾಸ ಪರಂಪರೆ, ಭಾಗ ೨೮ ಹಾಲುಮತ ಹುಕ್ಕಬುಕ್ಕ ಸಾಂಸ್ಕೃತಿಕ ಪ್ರತಿಷ್ಠಾನ ಬಳ್ಳಾರಿ ಕುರುಭರು.. ನಾವು ಕುರುಭರು ಕುರುಭರು ಇಚ್ಚಿಸಿದ್ದಲ್ಲಿ ಅವರಿಗೆ ವೈಷ್ಣವ ದೀಕ್ಷೆ ನೀಡುತ್ತೇನೆ :-- ಪೇಜಾವರ ಶ್ರೀ ಪಾದರು , ಉಡುಪಿ ನಿಮ್ಮ ಯಾವ ದೀಕ್ಷೆಯೂ ನಮಗೆ ಬೇಕಾಗಿಲ್ಲ , ಕುರುಭರು ತಾಯಿ ಗರ್ಭದಲ್ಲಿ ಇರುವಾಗಲೇ ದೀಕ್ಷೆ ಪಡೆದವರು :- ಸಿದ್ದರಾಮಯ್ಯ , ಪ್ರಸ್ತುತ ಮುಖ್ಯಮಂತ್ರಿ ವಾಹ್..! ಎಂಥಾ ಮಾತು ಸಿದ್ದರಾಮಯ್ಯ.. ಅಂದು ನನಗೆ ಸಿದ್ದರಾಮಯ್ಯ ಬಹಳವೇ ಇಷ್ಟವಾದರು , ಮನುಷ್ಯ ತನ್ನ ಕುಲದ ಸತ್ ಸಂಪ್ರದಾಯ ಬಿಟ್ಟುಕೊಡಲಿಲ್ಲ ...! ಭೇಷ್ ಎನಿಸಿತು.  ಕುರುಭರ ಇತಿಹಾಸ ತಿಳಿಯಿರಿ. ಕುರುಭರು ಮೂಲತಃ ನಾಗಕುಲದವರು ಎನ್ನಿಸಿಕೊಳ್ಳುವರು , ಪಲ್ಲವರು ಎಂದು ಕರ್ನಾಟಕದಲ್ಲಿ , ಪೊಲಿಯಾರ್ / ಪೊಲಯರ್ ಎಂದು ಕೇರಳದಲ್ಲಿ ಪಲ್ಲಿಗ ಎಂದು ಮಹಾರಾಷ್ಟ್ರದಲ್ಲಿ , ಉತ್ತರ ಭಾರತದೆಡೆ ಹಟ್ಟಿಗಾರರೆಂದು ಗುರುತಿಸಲ್ಪಡುತ್ತಾರೆ‌. ಕುರುಭ ( ಕುರು - ಪರತತ್ವ ಭ - ಗಳಿಸುವವ) ಎಂಬ ದೀಕ್ಷಾ ಪದ್ದತಿ. ಕುರುಭ ಒಂದು ಸಿದ್ದ ಶೈವ ಶಾಖೆ. ಕುರುಭರು ಅರ್ಥಾತ್ ಪಲ್ಲವರು 5-7ನೇ ಶತಮಾನದಲ್ಲಿ ಲಿಂಗ ದರಿಸುತ್ತಿದ್ದರು ಎಂಬ ವಿವರ ಶಾಸನಗಳಲ್ಲಿ ಇದೆ. ಪಲ್ಲವರ ಸಹೋದರ ವಂಶಾವಳಿ ಛಲವಾದಿ ಚಾಳುಕ್ಯ ಮಾದಿಗರು (ಕುರುಭರಲ್ಲಿ ಸಾದರು) ಸಹ ಲಿಂಗದಾರಿಗಳಾಗಿದ್ದ ವಿವರವಿದೆ. 2ನೇ ಶತಮಾನದಲ್ಲಿ ಭಾರತದ ವಂಶಸ್ಥರು ಭಾರ ಕುಲದ ಮಾದಿಗರು ಭಾರಶಿವ ನೆಂಬ ರಾಜ ...