Skip to main content

"ಶ್ರೀಹಾಲುಮತ ಸೌಹಾರ್ದ ಸಹಕಾರಿ ನಿ." ನಾಳೆ ಪೂಜೆಯೊಂದಿಗೆ ಪ್ರಾರಂಭವಾಗುತ್ತಿದೆ

ಹಾಲುಮತ  ಮಹಾಸಭಾ ದಾವಣಗೆರೆ ಜಿಲ್ಲಾ ಸಮಿತಿಯಿಂದ
ಪ್ರಥಮ ಆರ್ಥಿಕ ಸಂಸ್ಥೆ
"ಶ್ರೀಹಾಲುಮತ ಸೌಹಾರ್ದ ಸಹಕಾರಿ ನಿ."
ನಾಳೆ ಪೂಜೆಯೊಂದಿಗೆ ಪ್ರಾರಂಭವಾಗುತ್ತಿದೆ.
ಆಗಸ್ಟ್ ತಿಂಗಳಿನಲ್ಲಿ ಸಮಾಜ ಮುಖಂಡರು ಮತ್ತು
ಇತರೆ ಎಲ್ಲಾ ಸಮಾಜದವರನ್ನು ಆಹ್ವಾನಿಸಿ,
ಪೂಜ್ಯಶ್ರೀಗಳಿಂದ ಉದ್ಘಾಟನೆಯಾಗಲಿದೆ (ದಿನಾಂಕ ತಿಳಿಸಲಾಗುವುದು)
ಮುಂದುವರೆದ ಯಾವುದೇ ಸಮಾಜವನ್ನು ಗಮನಿಸಿ ನೋಡಿದಾಗ ತಿಳಿಯುವ ಸತ್ಯ.
ಆ ಸಮುದಾಯಗಳಲ್ಲಿ ಶಿಕ್ಷಣ ಸಂಸ್ಥೆಗಳು ಮತ್ತು ಬ್ಯಾಂಕುಗಳು ಹೆಚ್ಚಿನ ಸಂಖ್ಯೆಯಲ್ಲಿರುವುದು.

ಈ ಎರಡೂ ಕ್ಷೇತ್ರಗಳು ಬಲಿಷ್ಠವಾಗಿರುವುದರಿಂದ ರಾಜಕೀಯವಾಗಿ ಹೆಚ್ಚು ಪ್ರಬಲವಾಗಿದ್ದಾರೆ. ಇದು ನಮ್ಮೆಲ್ಲರಿಗೂ ತಿಳಿದಿದೆ.
ನಮ್ಮ ಕುರುಬ ಸಮಾಜದಲ್ಲಿ ಶಿಕ್ಷಣ ಸಂಸ್ಥೆಗಳು ಮತ್ತು ಬ್ಯಾಂಕುಗಳು
ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿ ಜಿಲ್ಲೆಗಳಲ್ಲೂ  ಉತ್ತಮ ಗುಣಮಟ್ಟದ ಶಿಕ್ಷಣ ಸಂಸ್ಥೆಗಳು
ಮತ್ತು ಬ್ಯಾಂಕುಗಳು ತೆರೆಯಬೇಕು.
ಆ ಗುರಿಯೊಂದಿಗೆ
ಹಾಲುಮತ ಮಹಾಸಭಾ ದಾವಣಗೆರೆ ಜಿಲ್ಲಾ ಸಮಿತಿಯ ಪದಾಧಿಕಾರಿಗಳು 
2 ತಿಂಗಳಿನಲ್ಲಿ ಶೇರು ಸಂಗ್ರಹಣೆಯ ಕಾರ್ಯ ಪ್ರಾರಂಭಿಸಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಆಷಾಢ ಪ್ರಾರಂಭವಾಗುವುದಕ್ಕಿಂತ ಮುಂಚಿತವಾಗಿ ನಾಳೆ 11-7-2018ರಂದು ಬೆಳಿಗ್ಗೆ ಪೂಜೆಯೊಂದಿಗೆ ಸರಳವಾಗಿ ಚಾಲನೆ ನೀಡಲಿದ್ದಾರೆ.
ಇದು ಮೊದಲ ಹೆಜ್ಜೆ.. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರಾರಂಭವಾಗಬೇಕು.
ನನ್ನ ಸಮಾಜ ಸದೃಢಗೊಳಿಸಬೇಕೆಂಬ ಮನಸ್ಸುಗಳು ಒಂದಾದರೆ ಸಾಕು ಅಸಾಧ್ಯ ಎನ್ನುವುದನ್ನು "ಸಾಧ್ಯ"ವಾಗಿಸುವ ಶಕ್ತಿ ನಮ್ಮ ಕುರುಬ ಸಮಾಜಕ್ಕೆ ಬರುತ್ತದೆ.
*  ಅವರು ಮಾಡಿಲ್ಲ,
   ಇವರು ಮಾಡಿಲ್ಲ
*  ಇವರು ಹಾಗೆ ಮಾಡಬೇಕಿತ್ತು
   ಅವರು ಹಾಗೆ ಮಾಡಬೇಕಿತ್ತು

ಇವುಗಳನ್ನು ಪಕ್ಕಕ್ಕಿಟ್ಟು.. ನಾವು ಏನು ಮಾಡಬೇಕು. ನನ್ನ ಕುರುಬ ಸಮಾಜಕ್ಕಾಗಿ ನನ್ನ ಕೊಡುಗೆ ಏನು ? ಎಂಬುದರ ಬಗ್ಗೆ ಮಾತ್ರ  ಚಿಂತನೆ ಮಾಡುವ ಸಮಯ ಇದಾಗಿದೆ.

* ಹಾಲುಮತ ಮಹಾಸಭಾ ಕಳೆದ 3 ವರ್ಷಗಳಿಂದ ಮಾಡುತ್ತಿರುವುದೇ ಪ್ರಾಮಾಣಿಕ ಪ್ರಯತ್ನಗಳನ್ನು.

*  ಕುರುಬ ಸಮಾಜವೂ ಶಕ್ತಿಯುತವಾಗಿ ಸಂಘಟಿತವಾಗುತ್ತಿದೆ ಎಂಬುದಕ್ಕೆ ಮುಂದಿನ ದಿನಗಳಲ್ಲಿ ನಡೆಯುವ ಬೆಳೆವಣಿಗೆಗಳು ಸಮಾಜದ ಬಂಧುಗಳಿಗೆ ತಿಳಿಯುತ್ತದೆ.
ನಮ್ಮ ಮುಂದೆ ಗುರಿ ಇದೆ... ಹಿಂದೆ ಗುರುವಿದ್ದಾರೆ, ಮತ್ಯಾಕೆ ಚಿಂತೆ
ಬೇಧ ಬಾವ ಮರೆತು ನಾವೆಲ್ಲರೂ ಒಂದೇ ಹಾಲುಮತ ಸಮಾಜದ ಬಂಧುಗಳು ಎಂಬ ಮನಸ್ಸಿನಿಂದ ಹೆಜ್ಜೆ ಹಾಕೋಣ..
---------------------------------------------------------------------
ಧನ್ಯವಾದಗಳು
ದಾವಣಗೆರೆ ಹಾಲುಮತ ಮಹಾಸಭಾ ಜಿಲ್ಲಾ ಸಮಿತಿಯ ಸದಸ್ಯರಿಗೆ
ಶ್ರೀಹಾಲುಮತ ಸೌಹಾರ್ದ ಸಹಕಾರಿ ನಿಯಮಿತದ ನಿರ್ದೇಶಕರುಗಳಿಗೆ
-----------------------------------------------------------------------

- ವಂದನೆಗಳೊಂದಿಗೆ
ರುದ್ರಣ್ಣ ಗುಳಗುಳಿ, ರಾಜ್ಯಾಧ್ಯಕ್ಷರು
ಹಾಲುಮತ ಮಹಾಸಭಾ,
ಕುರುಬ ಸಮುದಾಯದ ಸಮೃದ್ಧಿಗೊಂದು ಸಮೂಹ

Comments

Popular posts from this blog

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜೀವನ ಚರಿತ್ರೆಯನ್ನೊಮ್ಮೆ ಓದಿ

ಸಂಗೊಳ್ಳಿ ರಾಯಣ್ಣ  –  ಬ್ರಿಟಿಷರ  ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬ.  ಕಿತ್ತೂರು ಚೆನ್ನಮ್ಮಳ  ಬಲಗೈ ಬಂಟನಾದವನು ಸಂಗೊಳ್ಳಿ ರಾಯಣ್ಣ. ಪರಿಚಯ ಸಂಪಾದಿಸಿ ಬೆಳಗಾವಿ  ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿರುವ ನೇಗಿನಹಾಳ ಗ್ರಾಮವು ಕೆಂಚವ್ವನ ತವರು ಮನೆಯಾಗಿದ್ದರು ಸಂಗೊಳ್ಳಿಯು ರಾಯಣ್ಣನ ಜನ್ಮಸ್ಥಳ ಹಾಗೂ ಹೋರಾಟದ ಭೂಮಿಯಾಗಿದೆ. ಚೆನಮ್ಮಳ ಆಸ್ತಾನದಲ್ಲಿ ವಾಲಿಕರ್ ವೃತ್ತಿ ಮಾಡುವ ಕುರುಬ ಮನೆತನದವನಾಗಿದ್ದ ರಾಯಣ್ಣನನ್ನು ಜನ, ರಾಯಾ ಎಂದು ಕರೆಯುತ್ತಿದರು. ಅಷ್ಠೆ ಅಲ್ಲದೆ ಈತನು ಗೇರಿಲ್ಲಾ ತಂತ್ರದ ರೂವಾರಿಯಾಗಿದ್ದನು.  ಬ್ರಿಟಿಷರ  ವಿರುದ್ಧದ ಯುದ್ಧದಲ್ಲಿ ಚನ್ನಮ್ಮ ಹಾಗು ರಾಯಣ್ಣ ಇಬ್ಬರೂ ಸೆರೆಯಾಳಾದರು.  ಬ್ರಿಟಿಷರು ಚನ್ನಮ್ಮನನ್ನು  ಬೈಲಹೊಂಗಲದಲ್ಲಿ  ಸೆರೆಯಲ್ಲಿಟ್ಟರು. ಸಂಗೊಳ್ಳಿ ರಾಯಣ್ಣನನ್ನು ಬ೦ಧಿಸಿ ನ೦ದಗಡ ದಲ್ಲಿ ಗಲ್ಲಿಗೆರಿಸಿದರು.  ಜನವರಿ ೨೬  ೧೮೩೧ರಂದು ಗಲ್ಲಿ ಗೇರಿಸಿದರು. ಸಂಗೊಳ್ಳಿ ರಾಯಣ್ಣ ಜನಿಸಿದ ದಿನಾಂಕವಾದ  ಆಗಸ್ಟ್ ೧೫  ೧೭೯೮ ,  ಭಾರತಕ್ಕೆ  ಸ್ವಾತಂತ್ರ್ಯ ದೊರೆತ ದಿನಾಂಕವಾದರೆ, ಆತ ಗಲ್ಲಿಗೇರಿದ ದಿನಾಂಕ  ಜನವರಿ ೨೬ , ಭಾರತವು  ಗಣರಾಜ್ಯವೆಂದು  ಘೋಷಿಸಿದ ದಿನಾಂಕವಾಗಿದೆ. ರಾಯಣ್ಣನ ಉಕ್ತಿ, “ನನ್ನ ಕೊನೆ ಆಸೆ ಏನೆಂದರೆ, ಮತ್ತೆ ನಾನು ಈ ದೇಶದಲ್ಲಿ...

ಕುರುಬರು ಭಾರತದ ಇತಿಹಾಸದ ಮೊದಲ ಸಾಮ್ರಾಜ್ಯವಾದ ಮೌರ್ಯ ಸಾಮ್ರಾಜ್ಯವನ್ನು ಕಟ್ಟಿದವರು.

ಕುರುಬ ಒಂದು ಹಿಂದು ಸಮುದಾಯದ ಹೆಸರು. ಕುರುಬ ಎಂದರೆ ಹುಡುಕುವ ಅಥವ ಪಡೆಯುವ ಎಂದು ಅರ್ಥ ಬರುತ್ತದೆ. ಉದಾಹರಣೆ: ಜೇನು ಕುರುಬ ಜಾತಿ ಎಂದರೆ ಜೇನು ಹುಡುಕುವ ಜಾತಿ. ಕುರುಬರು ಹಾಲುಮತ ಅನುಯಾಯಿಗಳು. ಕುರುಬ ಎಂದರೆ ಜ್ಞಾನವನ್ನು(ಭ) ಹುಡುಕುವವನು (ಕುರು) ಎಂಬ ದಾರ್ಮಿಕ ಅರ್ಥವು ಇದೆ. ಕುರುಬ ಜಾತಿಯು ಅತಿ ಪುರಾತನವಾದ ಜಾತಿ.  ಇತಿಹಾಸ ಪೂರ್ವ ಕುರುಬ ಜನಾಂಗ ತುಂಬಾ ಪುರಾತನವಾದ ಜನಾಂಗ , ರಾಮಾಯಣ ಮತ್ತು ಮಹಾಭಾರತ ಕಾಲದಲ್ಲಿ ಕುರು ವಂಶ ಮತ್ತು ಯದು ವಂಶಗಳ ಪ್ರಸ್ತಾವನೆಯಾಗಿದೆ. ಮಾನವನು ಮೊದಲು ಕಾಡುಗಳಲ್ಲಿ ಬೇಟೆ ಆಡಿ ಮತ್ತು ಅಲೀದು ಗೆಡ್ಡೆ, ಗೆಣಸು ತಿನ್ನುತಿದ್ದ , ಕ್ರಮೇಣ ಅವನು ಪ್ರಾಣಿಗಳನ್ನು ಪಳಗಿಸಿ ಸಾಕ ತೊಡಗಿದ, ಆ ನಂತರ ಅವನು ವ್ಯವಸಾಯ ಮಾಡುವದನ್ನು ಕಲಿತ, ನಂತರ ಅವನು ಹಳ್ಳಿಗಳಲ್ಲಿ ವಾಸಿಸ ತೊಡಗಿದ. ಕುರುಬರು ಈ ಎಲ್ಲ ಮಾನವನ ಆಯಾಮಗಳನ್ನು ದಾಟಿದವರು. ಅತಿ ಪುರಾತನವಾದ ಈ ಸಮುದಾಯದಿಂದ ಕಾಲ ಕ್ರಮೇಣ ಇತರೆ ಜನಾಂಗದವರು ಬೇರೆಯಾಗ ತೊಡಗಿದರು. ಉದಾಹರಣೆಗೆ ವಕ್ಕಲುತನ ಮಾಡುವನು ವಕ್ಕಲಿಗನಾದ, ಬೇಟೆಯಾಡು ವವನು ಬೇಡನಾದ , ಮಡಿಕೆ ಮಾಡುವವನು ಕುಂಬಾರನಾದ , ಈ ಇತರೆ ಜನಾಂಗದವರು ಮಾನವನ ಬೇಡಿಕೆಗಳಿಗೆ ಅನುಗುಣವಾಗಿ ತಮ್ಮ ವೃತ್ತಿಗಳನು ಮಾಡತೊಡಗಿದರು. ಹೀಗೆ ಪುರಾತನವಾದ ಕುರುಬ ಮತ್ತು ಯಾದವ ವಂಶಗಳಿಂದ ಸಣ್ಣ ಪುಟ್ಟ ಜಾತಿಗಳು ಹುಟ್ಟಿಕೊಂಡವು. ಭಾರತ ಇತಿಹಾಸ . ಕುರುಬರು ಭಾರತದ ಇತಿಹಾಸದ ಮೊದಲ ಸಾಮ್ರಾಜ್ಯವಾದ ಮೌರ್ಯ...

ಕುರುಬರ ಇತಿಹಾಸ ತಿಳಿಯಿರಿ

ಕುರುಬರ ಇತಿಹಾಸ ಪರಂಪರೆ, ಭಾಗ ೨೮ ಹಾಲುಮತ ಹುಕ್ಕಬುಕ್ಕ ಸಾಂಸ್ಕೃತಿಕ ಪ್ರತಿಷ್ಠಾನ ಬಳ್ಳಾರಿ ಕುರುಭರು.. ನಾವು ಕುರುಭರು ಕುರುಭರು ಇಚ್ಚಿಸಿದ್ದಲ್ಲಿ ಅವರಿಗೆ ವೈಷ್ಣವ ದೀಕ್ಷೆ ನೀಡುತ್ತೇನೆ :-- ಪೇಜಾವರ ಶ್ರೀ ಪಾದರು , ಉಡುಪಿ ನಿಮ್ಮ ಯಾವ ದೀಕ್ಷೆಯೂ ನಮಗೆ ಬೇಕಾಗಿಲ್ಲ , ಕುರುಭರು ತಾಯಿ ಗರ್ಭದಲ್ಲಿ ಇರುವಾಗಲೇ ದೀಕ್ಷೆ ಪಡೆದವರು :- ಸಿದ್ದರಾಮಯ್ಯ , ಪ್ರಸ್ತುತ ಮುಖ್ಯಮಂತ್ರಿ ವಾಹ್..! ಎಂಥಾ ಮಾತು ಸಿದ್ದರಾಮಯ್ಯ.. ಅಂದು ನನಗೆ ಸಿದ್ದರಾಮಯ್ಯ ಬಹಳವೇ ಇಷ್ಟವಾದರು , ಮನುಷ್ಯ ತನ್ನ ಕುಲದ ಸತ್ ಸಂಪ್ರದಾಯ ಬಿಟ್ಟುಕೊಡಲಿಲ್ಲ ...! ಭೇಷ್ ಎನಿಸಿತು.  ಕುರುಭರ ಇತಿಹಾಸ ತಿಳಿಯಿರಿ. ಕುರುಭರು ಮೂಲತಃ ನಾಗಕುಲದವರು ಎನ್ನಿಸಿಕೊಳ್ಳುವರು , ಪಲ್ಲವರು ಎಂದು ಕರ್ನಾಟಕದಲ್ಲಿ , ಪೊಲಿಯಾರ್ / ಪೊಲಯರ್ ಎಂದು ಕೇರಳದಲ್ಲಿ ಪಲ್ಲಿಗ ಎಂದು ಮಹಾರಾಷ್ಟ್ರದಲ್ಲಿ , ಉತ್ತರ ಭಾರತದೆಡೆ ಹಟ್ಟಿಗಾರರೆಂದು ಗುರುತಿಸಲ್ಪಡುತ್ತಾರೆ‌. ಕುರುಭ ( ಕುರು - ಪರತತ್ವ ಭ - ಗಳಿಸುವವ) ಎಂಬ ದೀಕ್ಷಾ ಪದ್ದತಿ. ಕುರುಭ ಒಂದು ಸಿದ್ದ ಶೈವ ಶಾಖೆ. ಕುರುಭರು ಅರ್ಥಾತ್ ಪಲ್ಲವರು 5-7ನೇ ಶತಮಾನದಲ್ಲಿ ಲಿಂಗ ದರಿಸುತ್ತಿದ್ದರು ಎಂಬ ವಿವರ ಶಾಸನಗಳಲ್ಲಿ ಇದೆ. ಪಲ್ಲವರ ಸಹೋದರ ವಂಶಾವಳಿ ಛಲವಾದಿ ಚಾಳುಕ್ಯ ಮಾದಿಗರು (ಕುರುಭರಲ್ಲಿ ಸಾದರು) ಸಹ ಲಿಂಗದಾರಿಗಳಾಗಿದ್ದ ವಿವರವಿದೆ. 2ನೇ ಶತಮಾನದಲ್ಲಿ ಭಾರತದ ವಂಶಸ್ಥರು ಭಾರ ಕುಲದ ಮಾದಿಗರು ಭಾರಶಿವ ನೆಂಬ ರಾಜ ...